ಮನಕ್ಕೆ ನೆನಹಾಗಿ…

ಇಂಥ ಒಂದು ದಿನದಂದು…

Posted in philosophy, ನಗರಗಳು, ವಿಚಾರ by ಸಂಕೇತ on November 30, 2008

ಕಳೆದ ೧೨-೧೮ ತಿಂಗಳಲ್ಲಿ ಲೆಕ್ಕವಿಲ್ಲದಷ್ಟು ಸ್ಫೋಟಗಳು ನಡೆದಿವೆ. ಎಲ್ಲೋ ಒಮ್ಮೆ ಓದಿದ್ದಂತೆ, ಪ್ರತಿ ೬ ವಾರಕ್ಕೊಮ್ಮೆ ತಪ್ಪದೇ ಯಾವುದಾದರೂ ಒಂದು ನಗರದಲ್ಲಿ ಬಾಂಬುಗಳು ಸಿಡಿಯುತ್ತಿವೆ, ಜೀವಗಳು ಹೋಗುತ್ತಿವೆ. ನಾನು ದೂರದಲ್ಲಿರುವುದು ಹತಾಶೆಯ ಭಾವವನ್ನು ಇನ್ನಷ್ಟು ಹೆಚ್ಚಿಸುತ್ತದೆ, ಪ್ರತಿ ಸಲವೂ. ಆದರೆ ಮೊನ್ನೆ ೨೬ನೇ ತಾರೀಖು ಮಧ್ಯಾಹ್ನ (ಭಾರತದಲ್ಲಿ ಮಧ್ಯರಾತ್ರಿ) ನನ್ನ ಮನಸ್ಸಿನ ಭಾವ ಹಿಂದೆಂದಿನದಕ್ಕಿಂತ ತುಂಬ ಭಿನ್ನವಾಗಿತ್ತು. ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳು ನಮ್ಮೆಲ್ಲರ ದಿನಚರಿಯ ಅಂಗವಾಗಿಬಿಟ್ಟಿವೆ. ಆದರೆ ಈ ಸಲದ್ದು ಕೊಟ್ಟ ಆಘಾತ ಮಾತ್ರ ಎಣೆಯಿಲ್ಲದ್ದು. ನಮ್ಮ ಮನೆ, ಊರು, ದೇಶದ ಬಹುತೇಕ ಮಂದಿ ನೆಮ್ಮದಿಯಿಂದ ನಿದ್ದೆ ಮಾಡುತ್ತಿದ್ದಾಗ ನಡೆಯುತ್ತಿದ್ದ ಅತಿಕ್ರಮಣವನ್ನು ಸುದ್ದಿಯಲ್ಲಿ ಓದುತ್ತ, ನೋಡುತ್ತ ಕಂಗಾಲಾಗಿ ಕೂತಿದ್ದೆ. ಬಾಂಬೆಯಂಥ ಒಂದು ಬೃಹತ್ ನಗರವನ್ನು ಒಂದಷ್ಟು ಅಮಾನುಷ ಯುವಕರು ತೆಕ್ಕೆಗೆ ತೆಗೆದುಕೊಂಡು ಅಟ್ಟಹಾಸಗೈಯುತ್ತಿದ್ದ ದೃಶ್ಯಗಳು ನಂಬಲಸಾಧ್ಯವಾದುವಾಗಿದ್ದುವು. ಲ್ಯಾಬ್‍ನಲ್ಲಿ ಕಂಪ್ಯೂಟರ್ ಮುಂದೆ ಕೂತು ನೋಡನೋಡುತ್ತಿದ್ದಂತೆ ೪ ಸಾವು ಎಂಬುದು ೮೦ ಸಾವು ಎಂದು ಬದಲಾಗಿದ್ದನ್ನು ಕಂಡು, ಸದ್ಯಕ್ಕೆ ಇದು ಮುಗಿದರೆ ಸಾಕು ಎಂದು ಕೈಚೆಲ್ಲಿದ್ದೆ.
(more…)